ಉಡುಪಿ ಮಿತ್ರ ಪತ್ರಿಕೆ ಸುದ್ಧಿ :
ಉಡುಪಿ ಮಾರ್ಚ್ ೦೨ : ಬ್ರಹ್ಮಾವರ ತಾಲೂಕು ಹಾರಾಡಿ ಗ್ರಾಮದ ಸಾಲಿಕೇರಿ ಜಂಕ್ಷನ್ನಿಂದ ಕಾಮೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿರುವ ಸಕ್ಕರೆ ಕಾರ್ಖಾನೆಯ ಹಳೆಯ ಕ್ವಾಟ್ರಸ್ ಎದುರು ಇರುವ ಮಾವಿನ ಮರದ ಕೊಂಬೆಯಲ್ಲಿ ಫೆಬ್ರವರಿ 21 ರಂದು ಸುಮಾರು 40-45ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ದೇಹವನ್ನು ಶವಾಗಾರದಲ್ಲಿರಿಸಲಾಗಿದೆ.

ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2561966 ಮೊ.ನಂ: 9480805432 ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08250-2561044, ಮೊ.ನಂ: 9480805453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



