• May 17, 2026
  • Last Update May 16, 2026 9:23 am
  • Brahmavara

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ; ಆಲೂರಿನ ಅನನ್ಯರನ್ನು ಗೌರವಿಸಿದ ಸಚಿವೆ ಹೆಬ್ಬಾಳ್ಕರ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ; ಆಲೂರಿನ ಅನನ್ಯರನ್ನು ಗೌರವಿಸಿದ ಸಚಿವೆ ಹೆಬ್ಬಾಳ್ಕರ್

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಕುಂದಾಪುರ ಮೇ೧೩: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಆಲೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಲೂರಿನ ಕುಸುಮಾಕರ ಆಚಾರ್ಯ & ಸುಮಾ ಆಚಾರ್ಯ ದಂಪತಿಯ ಪುತ್ರಿ ಅನನ್ಯ ಇವರು ಒಟ್ಟು 616 ಅಂಕಗಳನ್ನು ಪಡೆದು ಶೇ. 98.56%% ಫಲಿತಾಂಶ ದಾಖಲಿಸಿದ್ದು ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ.


ಇವರನ್ನು ಜಿಲ್ಲಾಡಳಿತದ ವತಿಯಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

administrator

Related Articles

Leave a Reply

Your email address will not be published. Required fields are marked *

You cannot copy content of this page