• February 9, 2026
  • Last Update February 2, 2026 6:06 pm
  • Brahmavara

ಸಾಹೇಬರಕಟ್ಟೆ -ಶಿರಿಯಾರ ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

ಸಾಹೇಬರಕಟ್ಟೆ -ಶಿರಿಯಾರ ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ, ಉಡುಪಿಮಿತ್ರ ಪತ್ರಿಕೆ ಸುದ್ಧಿ
ಯಾವುದೇ ಸಹಕಾರಿ ಸಂಘದ ಅಭಿವೃದ್ಧಿಗೆ ಆಡಳಿತ ಮಂಡಳಿಯ ಪ್ರಾಮಾಣಿಕ ಪ್ರಯತ್ನ ಮುಖ್ಯ. ಎಲ್ಲರ ಉದ್ಧೇಶ ಒಂದೇ ಆಗಿದ್ದರೆ ಯಾವುದೇ ಸಂಸ್ಥೆ ಅಭಿವೃದ್ಧಿಯಾಗಲಿದೆ ಎಂಬುದಕ್ಕೆ ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಸಾಕ್ಷಿಯಾಗಿದೆ. ೧೮ ವರ್ಷಗಳಲ್ಲೇ ಸುಸಜ್ಜಿತ ಹವಾನಿಯಂತ್ರಿತ ಕಟ್ಟಡ ನಿರ್ಮಿಸಲು ಆಡಳಿತ ಮಂಡಳಿಯ ಪ್ರಾಮಾಣಿಕ ಪ್ರಯತ್ನ ಕಾರಣವಾಗಿದೆ. ಸಂಸ್ಥೆ ಒಂದಷ್ಟು ಸಮಾಜಸೇವಾ ಚಟುವಟಿಕೆಗಳಿಗೂ ದೇಣಿಗೆ ನೀಡಿರುವುದು ಸಾಮಾಜಿಕ ಕಳಕಳಿಗೆ ಸಾಕ್ಷಿಯಾಗಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ನುಡಿದರು. ಅವರು ಸಾಹೇಬರಕಟ್ಟೆ – ಶಿರಿಯಾರ ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಹವಾನಿಯಂತ್ರಿತ ಕಟ್ಟಡ ಉದ್ಘಾಟಿಸಿ ಮಾತನಾಡಿದರು.


ಜಿಎಸ್.ಬಿ ಸಮಾಜದ ಪ್ರತಿಯೊಬ್ಬರು ಕಠಿಣ ಶ್ರಮಿಗಳು, ವ್ಯವಹಾರ ಚತುರರು, ಸೇವಾ ಮನೋಭಾವನೆ ವುಳ್ಳವರು. ಈ ಸಮಾಜ ಎಲ್ಲಾ ಸಮಾಜದೊಂದಿಗೆ ಬೆರೆತ ಸಮಾಜ. ಇನ್ನೊಬ್ಬರಿಗೆ ಹಿತವನ್ನು ಬಯಸಿದ ಸಮಾಜ. ಧಾರ್ಮಿಕ ಕಾರ್ಯಕ್ರಮಗಳಿಗೆ ಸದಾ ಬೆಂಬಲ ನೀಡುತ್ತಾ ಬಂದ ಸಮಾಜ. ಇಂತಹ ಸಮಾಜದ ಮುಖಂಡರ ಸೌಹಾರ್ದ ಸಹಕಾರಿ ಸಂಘ ಹತ್ತಾರು ಶಾಖೆಗಳನ್ನು ಸ್ಥಾಪಿಸುವಂತಾಗಲಿ ಎಂದು ಗರಿಕೆಮಠ ಅರ್ಕ ಗಣಪತಿ ದೇವಸ್ಥಾನದ ಅರ್ಚಕ ವೇ.ಮೂ. ರಾಮಪ್ರಸಾದ್ ಅಡಿಗ ಭದ್ರತಾ ಕೋಶ ಉದ್ಘಾಟಿಸಿ ಮಾತನಾಡಿದರು.


ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಾಹೇಬರಕಟ್ಟೆ ಅಶೋಕ್ ಪ್ರಭು ವಹಿಸಿದ್ದು ಅವರು ಮಾತನಾಡಿ ನಿರ್ದೇಶಕ ಮಂಡಳಿಯ ಸದಸ್ಯರು, ಸಿಬ್ಬಂದಿಗಳು ಹಾಗೂ ಸರ್ವರ ಸಹಕಾರದಲ್ಲಿ ನಮ್ಮ ಸಂಸ್ಥೆ ಅಭಿವೃದ್ಧಿಗೊಂಡಿದ್ದು ಅವರ ಸಹಕಾರಕ್ಕೆ ಕೃತಜ್ಞತೆ ಅರ್ಪಿಸಿಕೊಳ್ಳುತ್ತೇನೆ ಎಂದರು.


ಸೌಹಾರ್ದ ಸಿರಿ ನೂತನ ಕಟ್ಟಡವನ್ನು ಶಿರಾಲಿಯ ಶ್ರೀ ಮಹಾಗಣಪತಿ ಮಾಹಮ್ಮಾಯ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಿನಾಥ್ ಕಾಮತ್, ಭದ್ರತಾ ಕೊಠಡಿಯನ್ನು ಪಾಂಡುರಂಗ ನಾಯಕ್, ಆಡಳಿತ ಕಚೇರಿ ಸಭಾಂಗಣವನ್ನು ಶಿರಿಯಾರ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಸುಧೀಂದ್ರ ಶೆಟ್ಟಿ . ಅಧ್ಯಕ್ಷರ ಕೊಠಡಿಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ ನಿರ್ದೇಶಕ ಎಸ್. ಕೆ. ಮಂಜುನಾಥ, ಗಣಕ ಯಂತ್ರವನ್ನು ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷ ಪ್ರದೀಪ್ ಬಲ್ಲಾಳ್ ಉದ್ಘಾಟಿಸಿದರು.


‘ಸೌಹಾರ್ದ ಸಿರಿ’ ಠೇವಣಿ ಪತ್ರವನ್ನು ಸ್ಥಾಪಕಾಧ್ಯಕ್ಷ ಶಿರಿಯಾರ ಪ್ರಭಾಕರ ನಾಯಕ್ ಹಸ್ತಾಂತರಿಸಿದರು.
ಅತಿಥಿಗಳಾಗಿ ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ, ಯಡ್ತಾಡಿ ಗ್ರಾಮ” ಪಂಚಾಯತ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.


ಯು ರಾಜೀವ ಭಟ್ ಉಪ್ಪುಂದ, ಸಂಘದ ಉಪಾಧ್ಯಕ್ಷ ಎಚ್. ನಾರಾಯಣ ಶೆಣೈ ಗಾವಳಿ, ಸಂಘದ ನಿರ್ದೇಶಕರಾದ ರಾಘವೇಂದ್ರ ಹೆಗ್ಡೆ, ವೆಂಕಟೇಶ್ ಪೈ ಸಾಸ್ತಾನ, ಪ್ರಸಾದ್ ಆರ್. ಭಟ್, ಜಗದೀಶ್ ಹೆಗ್ಡೆ, ರಾಘವೇಂದ್ರ ಪ್ರಭು, ಪಲ್ಲವಿ ವೈ.ನಾಯಕ್, ಸುನಿತಾ ಹೆಗ್ಡೆ ಉಪಸ್ಥಿತರಿದ್ದರು.


ಸ್ಥಾಪಕಾಧ್ಯಕ್ಷ ಶಿರಿಯಾರ ಪ್ರಭಾಕರ ನಾಯಕ್ ಹಾಗೂ ಅಧ್ಯಕ್ಷ ಅಶೋಕ್ ಪ್ರಭು ದಂಪತಿಗಳನ್ನು ಸನ್ಮಾನಿಸಲಾಯಿತು.


ಯಡ್ತಾಡಿ ಜಯಲಕ್ಷ್ಮಿ ಕಾಮತ್ ಪ್ರಾರ್ಥಿಸಿದರು. ಕಾರ್ಯನಿರ್ವಹಣಾಧಿಕಾರಿ ಎತ್ತಿನಟ್ಟಿ ಶಿವಾನಂದ ಶ್ಯಾನುಭಾಗ್ ವರದಿ ಮಂಡಿಸಿದರು. ನಿರ್ದೇಶಕ ಎಂ.ರವೀಂದ್ರನಾಥ ಕಿಣಿ ಸ್ವಾಗತಿಸಿದರು. ನಿರ್ದೇಶಕ ಮಾಧವ ಹೆಗ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯು ಪ್ರಸಾದ್ ಭಟ್ ವಂದಿಸಿದರು. ಗಣೇಶ್ ನಾಯಕ್ ಶಿರಿಯಾರ ಕಾರ್ಯಕ್ರಮ ನಿರೂಪಿಸಿದರು.

administrator

Related Articles

Leave a Reply

Your email address will not be published. Required fields are marked *