ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ದಿ:
ರಾಷ್ಟ್ರೀಯ ಹೆದ್ದಾರಿ -೬೬ ಉಳಿಸಿ ಹೋರಾಟ ಸಮಿತಿ ಸಂಚಾಲಕ ಗೋವಿಂದರಾಜ್ ಹೆಗ್ಡೆಯವರ ನೇತೃತ್ವದಲ್ಲಿ ಹೆದ್ದಾರಿ ಸಮಸ್ಯೆಗಳ ಕುರಿತು ಈ ಹಿಂದೆ ಸಾಕಷ್ಟು ಹೋರಾಟ ನಡೆಸಿದೆ. ಬ್ರಹ್ಮಾವರದ ಹೆದ್ದಾರಿ ಸಮಸ್ಯೆಯ ಕುರಿತು ಎ.೮ರಂದು ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರವನ್ನು ಗಮನಿಸಿ ಮುಂದಿನ ಹೋರಾಟ ಆರಂಭಿಸಲಾಗುವುದು ಎಂದು ಸಮಿತಿ ಸಂಚಾಲಕ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.
ಬ್ರಹ್ಮಾವರದಲ್ಲಿ ಹೆದ್ದಾರಿ ಸಮಸ್ಯೆಗಳ ಕುರಿತು ಸಮಿತಿ ಹಲವಾರು ಸಮಯಗಳಿಂದ ಹೋರಾಟಗಳನ್ನು ಎಲ್ಲರ ಸಹಕಾರದಿಂದ ಮಾಡುತ್ತಾ ಬಂದಿದೆ. ಮೊನ್ನೆ ನಡೆದ ದುರ್ಘಟನೆಯ ನಂತರ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಬ್ರಹ್ಮಾವರ ತಹಶೀಲ್ದಾರರ ನೇತೃತ್ವದಲ್ಲಿ ಪೊಲೀಸು, ಹೆದ್ದಾರಿ ಇಲಾಖೆಯ ಅಧಿಕಾರಿಗಳ ಜೊತೆ ಸರಣಿ ಸಭೆಗಳು ನಡೆಯುತ್ತಿದ್ದು ಎ.೮ರಂದು ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಸಭೆ ನಡೆಯುವುದಾಗಿ ತಿಳಿದು ಬಂದಿರುತ್ತದೆ. ಸಭೆಯ ನಂತರ ಜಿಲ್ಲಾಡಳಿತದ ತೀರ್ಮಾನದ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ಹಾಗೂ ೨೦೧೧ರಲ್ಲಿ ಎಂಬ್ಯಾಕ್ಮೆಂಟ್ ಬದಲಾವಣೆ ಆಗಲು ಕಾರಣ ಏನು? ಮತ್ತು ೨೦೧೩ರಿಂದ ಸಮಿತಿ ಪ್ಲೈ ಓವರ್ ಕುರಿತು ನಡೆಸಿರುವ ಪ್ರಯತ್ನಗಳ ಬಗ್ಗೆ ದಿನಾಕ ೦೯.೦೪.೨೦೨೫ರಂದು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿಗಳನ್ನು ದಾಖಲೆ ಸಹಿತ ಬ್ರಹ್ಮಾವರದ ನಾಗರಿಕರ ಗಮನಕ್ಕೆ ತರಲಿದ್ದೇನೆ. ಸಮಿತಿಯ ಮುಂದಿನ ಹೋರಾಟದ ಕುರಿತು ಮಾಹಿತಿ ನೀಡಲಿದ್ದೇನೆ ಎಂದು ಸಮಿತಿಯ ಸಂಚಾಲಕ ಗೋವಿಂದರಾಜ್ಹೆಗ್ಡೆಯವರು ತಿಳಿಸಿದ್ದಾರೆ.
