• June 29, 2025
  • Last Update June 29, 2025 10:13 am
  • Brahmavara

ಕುಡಿತ ಆರೋಗ್ಯ, ಆರ್ಥಿಕ, ನೆಮ್ಮದಿಯನ್ನು ಹಾಳು ಮಾಡಲಿದೆ – ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ

ಕುಡಿತ ಆರೋಗ್ಯ, ಆರ್ಥಿಕ, ನೆಮ್ಮದಿಯನ್ನು ಹಾಳು ಮಾಡಲಿದೆ – ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ

ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ಧಿ:
ಚಿತ್ತೂರು, ಜೂ.18: ನಾಲಗೆಗೆ ರುಚಿ ಅನ್ನಿಸಿದ್ದೆಲ್ಲವು ದೇಹದ ಆರೋಗ್ಯಕ್ಕೆ ಒಳಿತು ಎಂದು ಹೇಳಲು ಸಾಧ್ಯವಿಲ್ಲ. ನಾಲಗೆಗೆ ರುಚಿ ಕೊಡುತ್ತೆ ಅಥವಾ ಅಮಲಿನ ಸಂತೋಷ ನೀಡುತ್ತೆ ಎಂದು ಕುಡಿತದ ಚಟಕ್ಕೆ ಬಿದ್ದಲ್ಲಿ ಆರ್ಥಿಕ, ಆರೋಗ್ಯ, ಸಾಮಾಜಿಕ ಗೌರವದ ನಷ್ಟದ ಜೊತೆಯಲ್ಲಿ ಕೌಟುಂಬಿಕ ನೆಮ್ಮದಿ ಕಳಕೊಳ್ಳಬೇಕಾಗುತ್ತದೆ. ಮನೆಯಲ್ಲಿನ ಕುಟುಂಬ ಸದಸ್ಯರ ಸಂತೋಷವೂ ಕೆಟ್ಟು ಹೋಗಲಿದೆ. ಕುಡಿತದ ಚಟಕ್ಕೆ ಒಳಗಾದವರು ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ನೆಮ್ಮದಿಯ ಜೀವನ ಕಂಡುಕೊಳ್ಳಬೇಕೆಂದು ಹೈದರಬಾದ್ ಹೋಟೆಲ್ ಉದ್ಯಮಿ, 1939ನೇ ಮದ್ಯವರ್ಜನ ಶಿಬಿರದ ಗೌರವಾಧ್ಯಕ್ಷ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ನುಡಿದರು.


ಅವರು ಮದವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಕುಂದಾಪುರ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಕುಂದಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ. ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಕರ್ನಾಟಕ ರಾಜ್ಯ ಮದಪಾನ ಸಂಯಮ ಮಂಡಳಿ ಬೆಂಗಳೂರು, ಗ್ರಾಮ ಪಂಚಾಯತ್ ಚಿತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಆಲೂರು, ಆರಕ್ಷಕ ಠಾಣೆ ಕೊಲ್ಲೂರು ಇವರ ಸಹಯೋಗದೊಂದಿಗೆ ಚಿತ್ತೂರು ಬ್ರಹ್ಮಾಧ್ಯ ಕಲ್ಯಾಣ ಮಂಟಪದಲ್ಲಿ ನಡೆದ ಮದ್ಯವರ್ಜನ ಶಿಬಿರ ಉದ್ದೇಶಿಸಿ ಮಾತನಾಡಿದರು.


ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಸದಾಶಿವ ಶೆಟ್ಟಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜ ಪರಿವರ್ತನೆಯ ಉದ್ಧೇಶದಲ್ಲಿ ಸಾರ್ವಜನಿಕವಾಗಿ ನಡೆಸುವ ಈ ಶಿಬಿರದಿಂದ ಶಿಬಿರಾರ್ಥಿಗಳನ್ನು ಮದ್ಯಮುಕ್ತಗೊಳಿಸುವುದಲ್ಲದೆ ಸಮಾಜಕ್ಕೆ ಒಂದು ಸ್ಪಷ್ಟ ಉತ್ತಮ ಸಂದೇಶ ರವಾನಿಸುವ ಕೆಲಸವಾಗುತ್ತಿದೆ ಎಂದು ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ಅತುಲ್ ಕುಮಾರ್ ಶೆಟ್ಟಿ ನುಡಿದರು.
ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಉಮೇಶ್ ಶೆಟ್ಟಿ ಶಾನ್ಕಟ್ಟು ಸಮಾರಂಭದ ಅಧ್ಯಕ್ಷತೆ ವಹಿಸಿದ್ದು ಮಾತನಾಡಿ ಪ್ರತಿಯೊಬ್ಬರು ಸಮಾಜದಲ್ಲಿ ಗೌರವದ ಜೀವನ ಸಾಗಿಸುವಂತಹ ಜೀವನ ಆರಿಸಿಕೊಳ್ಳಬೇಕು. ಕುಡಿತದ ಚಟಕ್ಕೆ ಬಿದ್ದಲ್ಲಿ ಎಲ್ಲವೂ ಹಾಳಾಗಲಿದೆ ಎಂದರು.


, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ರಟ್ಟಾಡಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಂಜಯ್ಯ ಶೆಟ್ಟಿ ಸಬ್ಲಾಡಿ, ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ, ಚಿತ್ರಕೂಟ ಆಯುರ್ವೇದ ಆಸ್ಪತ್ರೆಯ ಡಾ.ರಾಜೇಶ್ ಬಾಯರಿ, ವನದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ವಂಡಬಳ್ಳಿ ಜಯರಾಮ ಶೆಟ್ಟಿ, ಜನಜಾಗೃತಿ ವೇದಿಕೆ ಚಿತ್ತೂರು ವಲಯ ಅಧ್ಯಕ್ಷ ನಾಗಪ್ಪ ಕೊಠಾರಿ, ಆಲೂರು ಗ್ರಾಮಪಂಚಾಯತ್ ಅಧ್ಯಕ್ಷ ರಾಜೇಶ್ ದೇವಾಡಿಗ, ಕೆರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದರ್ಶನ ಶೆಟ್ಟಿ ಕೆರಾಡಿ, ನಿವೃತ್ತ ಶಿಕ್ಷಕ ಎಸ್. ಮಹಾಬಲ ಶೆಟ್ಟಿ, ಚಿತ್ತೂರು ವಲಯ ಅಧ್ಯಕ್ಷ ಶಿವರಾಮ ಪೂಜಾರಿ , ಇಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೇಮತಿ ಆಶಾ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.
ಕರಾವಳಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯೋಜನಾಧಿಕಾರಿ ಉಮೇಶ್ ಶೆಟ್ಟಿ ಎಚ್. ಸ್ವಾಗತಿಸಿದರು. ಶ್ರೀಮತಿ ಗೀತಾ ಪ್ರಾರ್ಥಿಸಿದರು.
ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ರೇಣುಕಾ ವಂದಿಸಿದರು. ವಂಡ್ಸೆ ವಲಯದ ಮೇಲ್ವಿಚಾರಕ ಚಂದ್ರ ಮಧುವನ ಕಾರ್ಯಕ್ರಮ ನಿರೂಪಿಸಿದರು.

administrator

Related Articles

Leave a Reply

Your email address will not be published. Required fields are marked *